ಬೆಳ್ತಂಗಡಿ: ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ನಡೆದಿದೆ.

ಸೌತಡ್ಕ ಗೋ ಶಾಲೆ ಬಳಿ ಊರಿನ ಒಳಗೆ ನುಗ್ಗಿದ ಆನೆಯನ್ನು ಓಡಿಸಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಎಂಬವರು ಆನೆಯ ದಾಳಿಗೆ ಬಲಿಯಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಬಾಲಕೃಷ್ಣ ಶೆಟ್ಟಿ ಕೊಕ್ಕಡ ಗ್ರಾಮದ ನಿವಾಸಿಯಾಗಿದ್ದು, ಆನೆಯನ್ನು ಓಡಿಸುವ ಪ್ರಯತ್ನದ ವೇಳೆ ಆನೆ ಅವರು ಮೇಲೆ ದಾಳಿ ಮಾಡಿ ತುಳಿದಿದೆ ಎನ್ನಲಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಆಗಮಿಸಿ ತನಿಖೆ ಮುಂದುವರೆಸಿದ್ದಾರೆ. ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.